ಉತ್ತರ ಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರನ್ನು ಭೇಟಿಯಾದ ಹೊನ್ನಾವರ ವಾಣಿಜ್ಯ ಬಂದರು ವಿರೋಧಿ ಹೋರಾಟ ಸಮಿತಿಯವರು.

ಹೊನ್ನಾವರ ಖಾಸಗಿ ವಾಣಿಜ್ಯ ಬಂದರು ನಿರ್ಮಾಣ ಕಾಮಗಾರಿ ಕಾನೂನು ಉಲ್ಲಂಘಿಸಿ ನಡೆಯುತ್ತಿದ್ದು,ರಾಜ್ಯ ಹೈಕೋರ್ಟ್ ನಲ್ಲಿ ಬಂದರು ನಿರ್ಮಾಣದ ವಿರುದ್ಧ ಪ್ರಕರಣ ಇರುವಾಗಲೇ ಇಂತಹ ಕಾನೂನುಬಾಹಿರ ಚಟುವಟಿಕೆಗಳು ಅನಧಿಕೃತ ಗುತ್ತಿಗೆದಾರನ ಸುರ್ಪದಿಯಲ್ಲಿ ನಡೆಯುತ್ತಿರುವುದರಿಂದ ಮತ್ತು ಭಯದ ವಾತಾವರಣ ಸೃಷ್ಟಿಯಾಗಿರುವುದರಿಂದ ಕಳವಳಗೊಂಡಿರುವ ಬಂದರು ನಿರ್ಮಾಣ ವಿರೋಧಿ ಸಮಿತಿಯವರು ಉತ್ತರ ಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರಿಗೆ ರಕ್ಷಣೆಗಾಗಿ ಮನವಿ ಸಲ್ಲಿಸಿರುತ್ತಾರೆ.ಸ್ಥಳೀಯ ಮೀನುಗಾರರ ಮೇಲೆ ಅನಧಿಕೃತ ಗುತ್ತಿಗೆದಾರರು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದ್ದು,ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ವಿನಂತಿಸಲಾಗಿದೆ.

www.kharvionline.com

Leave a Reply

Your email address will not be published. Required fields are marked *