ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

ಕೊಂಕಣಿ ಖಾರ್ವಿ ಸಮಾಜದ ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಮತ್ತು ಓರಿಯಂಟೇಶನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ವಿಶ್ವ ಕೊಂಕಣಿ ಕೇಂದ್ರ ಮಂಗಳೂರು ಮತ್ತು ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾ ಇದರ ಆಶ್ರಯದಲ್ಲಿ ಇಂದು ಕೊಂಕಣಿ ಖಾರ್ವಿ ಮಹಾಜನ ಸಭಾದ ಕೇಂದ್ರ ಕಚೇರಿ ಹೊಸಾಡು ತ್ರಾಸಿಯಲ್ಲಿ ನಡೆದ ಸಮಾರಂಭದಲ್ಲಿ ತಾಂತ್ರಿಕ ಶಿಕ್ಷಣ ಕಲಿಯುತ್ತಿರುವ ಕೊಂಕಣಿ ಖಾರ್ವಿ ಸಮಾಜದ ವಿದ್ಯಾರ್ಥಿಗಳಿಗೆ 2020 21 ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಿತು.

ಶ್ರೀ ನಂದಗೋಪಾಲ್ ಶೆಣೈ, ಅಧ್ಯಕ್ಷರು, ಕೊಂಕಣಿ ಭಾಸ್ ಆನಿ ಸಂಸ್ಕೃತಿ ಪ್ರತಿಷ್ಠಾನ, ಶ್ರೀ ಗಿರಿಧರ್ ಕಾಮತ್, ಕಾರ್ಯದರ್ಶಿ, ಕೊಂಕಣಿ ಭಾಸ್ ಆನಿ ಸಂಸ್ಕೃತಿ ಪ್ರತಿಸ್ತಾನ್, ಡಾ. ದೇವದಾಸ್ ಪೈ ಬಿ, ನಿರ್ದೇಶಕ (ಸಂಶೋಧನೆ), ವಿಶ್ವ ಕೊಂಕಣಿ ಕೇಂದ್ರ, ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾದ ಅಧ್ಯಕ್ಷರಾದ ಶ್ರೀ ಮೋಹನ್ ಬನವಾಲಿಕರ್, ಕಾರ್ಯದರ್ಶಿ ಶ್ರೀ ಕೃಷ್ಣ ತಾಂಡೇಲ ಮತ್ತು ಖಜಾಂಚಿ ಶ್ರೀ ಜಿ. ಕೆ. ಶೀನಾ ಹಾಗೂ ಖಾರ್ವಿ ಸಮಾಜದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *