ಕುಂದಾಪುರ ಕೊಂಕಣಿ ಖಾರ್ವಿ ಸಮಾಜದವರಿಂದ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನಾ ಕಾರ್ಯಕ್ರಮ

ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರನ್ನು ಕೇಂದ್ರ ಸರ್ಕಾರ ಗೌರವಪೂರ್ವಕವಾಗಿ ರಾಜ್ಯಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಿದ್ದು, ಈ ಬಗ್ಗೆ ಪರಮಪೂಜ್ಯರನ್ನು ಕುಂದಾಪುರ ಕೊಂಕಣಿ ಖಾರ್ವಿ ಸಮಾಜದ ವತಿಯಿಂದ ಗೌರವಪೂರ್ವಕವಾಗಿ ಅಭಿನಂದಿಸಲಾಯಿತು.

ಪೂಜ್ಯರ ಹಾಗೂ ಕ್ಷೇತ್ರದ ಮೇಲಿರುವ ನಂಬಿಕೆ ಹಾಗೂ ನಿಷ್ಟೆಯಿಂದ ಕುಂದಾಪುರದ ಕೊಂಕಣಿ ಖಾರ್ವಿ ಸಮುದಾಯ ಮಾಡಿರುವ ಅಭಿನಂದನೆ ಕಾರ್ಯಕ್ರಮ ಅತ್ಯಂತ ಪ್ರೀತಿಯಿಂದ ಸ್ವೀಕರಿಸಿದ್ದೇನೆ. ಕ್ಷೇತ್ರದಿಂದ ಏನೇ ಕಾರ್ಯಕ್ರಮಗಳಾದರು ಅದನ್ನು ಧನ್ಯತೆಯಿಂದ ಪರಿಚಯಿಸುವ ಸಮಾಜ ಎಂದು ಹರಸಿದ್ದಾರೆ ಪೂಜ್ಯರು.

ಕುಂದಾಪುರದ ಶ್ರೀ ಮಹಾಕಾಳಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರು, ಸಮಾಜದ ಮೊಕ್ತೇಸರರು, ವಿದ್ಯಾರಂಗ ಮಿತ್ರಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರು, ವಿದ್ಯಾನಿಧಿ ಯೋಜನೆಯ ಅಧ್ಯಕ್ಷರು ಮತ್ತು ಸದಸ್ಯರು , ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಮತ್ತು ಶ್ರೀ ಮಹಾಕಾಳಿ ಮಹಿಳಾ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪರಮ ಪೂಜ್ಯರ ಆಶೀರ್ವಾದ ಪಡೆದುಕೊಂಡರು.

www.kharvionline.com

Leave a Reply

Your email address will not be published. Required fields are marked *