ಬಹುಮುಖ ಪ್ರತಿಭೆಯ ಪಾವನಿ ಸುರೇಶ ಖಾರ್ವಿ

ಶ್ರೀ ಮದ್ಭಗವದ್ಗೀತಾ ಜಯಂತಿ ಆಚರಣೆ ಸಮಿತಿ ಇದರ ಆಶ್ರಯದಲ್ಲಿ ನಡೆಸಿದ ಜಿಲ್ಲಾ ಮಟ್ಟದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ಸೇವಾಸಂಗಮ ವಿದ್ಯಾ ಕೇಂದ್ರ ತೆಕ್ಕಟ್ಟೆಯ 7 ನೇತರಗತಿ ವಿದ್ಯಾರ್ಥಿನಿ ಪಾವನಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಬಹುಮುಖ ಪ್ರತಿಭೆಯ ಪಾವನಿ ಸುರೇಶ ಖಾರ್ವಿ ಕೋಡಿ ಮತ್ತು ಲತಾ ಸುರೇಶ ಖಾರ್ವಿ ದಂಪತಿಗಳ ಪುತ್ರಿಯಾಗಿದ್ದಾಳೆ.

3.12.22ರಂದು ದಾವಣಗೆರೆಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾ. ಶಿಕ್ಷಣ ಇಲಾಖೆ ಆಯೋಜಿಸಿದ ಪ್ರತಿಭಾ ಕಾರಂಜಿಯಲ್ಲಿ ದಿನಾಂಕ 1.12.22 ರಂದು ನಡೆದ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಲಘು ಸಂಗೀತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾಳೆ. ಧರ್ಮಸ್ಥಳ ಶಾಂತಿವನ ಟ್ರಸ್ಟ್ ಆಯೋಜಿಸಿದ ಸ್ಪರ್ಧೆಯಲ್ಲಿ ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಧರ್ಮಸ್ಥಳದಲ್ಲಿ ನಡೆಯುವ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾಳೆ.

ಇವರಿಗೆ ಖಾರ್ವಿ ಆನ್ಲೈನ್ ವತಿಯಿಂದ ತುಂಬು ಹೃದಯದ ಅಭಿನಂದನೆಗಳು.

www.kharvionline.com

4 thoughts on “ಬಹುಮುಖ ಪ್ರತಿಭೆಯ ಪಾವನಿ ಸುರೇಶ ಖಾರ್ವಿ

Leave a Reply

Your email address will not be published. Required fields are marked *