ಬೆಂಗಳೂರಿನಲ್ಲಿ ಖಾರ್ವಿ ಸಮಾಜ ಭಾಂದವರ ಹೋಳಿ ಸಂಭ್ರಮ

ಬೆಂಗಳೂರಿನಲ್ಲಿ ನೆಲೆಸಿರುವ ಕೊಂಕಣಿ ಖಾರ್ವಿ ಸಮಾಜ ಭಾಂದವರು ಇಂದು ಸಮಾಜದ ಆಸ್ಮಿತೆಯ ಮಹಾಪರ್ವ ಹೋಳಿಹಬ್ಬವನ್ನು ಸಕಲ ಸಂಭ್ರಮ ಉಲ್ಲಾಸಗಳಿಂದ ಅಭೂತಪೂರ್ವವಾಗಿ ಆಚರಿಸಿದರು.ಕುಣಿಗಲ್ ಶ್ರೀ ಸತ್ಯ ಶನೀಶ್ವರ ಗುಡಿಯ ಸಮೀಪದ ಪಂಚಮುಖಿ ಅಂಜನೇಯ ದೇವಸ್ಥಾನದ ಆವರಣದಲ್ಲಿ ಹೋಳಿಹಬ್ಬವನ್ನು ಬೆಂಗಳೂರಿನಲ್ಲಿ ನೆಲೆಸಿರುವ ಸರ್ವ ಕೊಂಕಣಿ ಖಾರ್ವಿ ಸಮಾಜ ಭಾಂದವರ ಸಹಯೋಗದಲ್ಲಿ ಆಚರಿಸಲಾಯಿತು.

ಮಕ್ಕಳಿಗೆ, ಯುವಕರು, ಮಹಿಳಿಯರಿಗೆ ಮತ್ತು ಹಿರಿಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನಗಳನ್ನು ವಿತರಿಸಲಾಯಿತು, ಮದ್ಯಾಹ್ನ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಹೋಳಿಹಬ್ಬದ ಈ ವೈಶಿಷ್ಟ್ಯಪೂರ್ಣ ಕಾರ್ಯಕ್ರಮವನ್ನು ಬೆಂಗಳೂರು ಕೊಂಕಣಿ ಖಾರ್ವಿ ವಿದ್ಯಾವೇದಿಕೆಯ ಸಾರಥ್ಯದಲ್ಲಿ ಯಶಸ್ವಿಯಾಗಿ ನಡೆಸಲಾಯಿತು.ಈ ಅಪೂರ್ವ ಕಾರ್ಯಕ್ರಮದ ಯಶಸ್ಸಿಗೆ ಕಾರಣೀಕರ್ತರಾದ ಸಮಾಜ ಭಾಂದವರಿಗೆ ಕೊಂಕಣಿ ಖಾರ್ವಿ ವಿದ್ಯಾವೇದಿಕೆ ಬೆಂಗಳೂರು ಇದರ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.

Leave a Reply

Your email address will not be published. Required fields are marked *