ನಿಗದಿತ ದಿನಾಂಕದ ನಂತರ ಬಂದರಿನಲ್ಲಿ ಮೀನುಗಾರಿಕೆ ನಡೆಸಿದರೆ ಶಿಸ್ತು ಕ್ರಮ – ಜಿಲ್ಲಾಧಿಕಾರಿ ಜಿ ಜಗದೀಶ್

ಮುಂಗಾರು ವಿಕೋಪ ನಿರ್ವಹಣೆಗೆ ಸನ್ನದ್ಧರಾಗಿ : ಜಿಲ್ಲಾಧಿಕಾರಿ ಜಿ.ಜಗದೀಶ್ ಕುಂದಾಪುರ : ಜಿಲ್ಲೆಗೆ ಇನ್ನು 2 ರಿಂದ 3 ದಿನದಲ್ಲಿ ಮುಂಗಾರು ಪ್ರವೇಶವಾಗುವ ಸಂಭವವಿದ್ದು, ಮುಂಗಾರು ಮಳೆಯಿಂದ ಸಂಭವಿಸಬಹುದಾದ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಸಮರ್ಪಕವಾಗಿ ನಿರ್ವಹಿಸಲು ಸನ್ನದ್ಧವಾಗಿರುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದರು. ಅವರು ವೀಡಿಯೋ ಸಂವಾದದ ಮೂಲಕ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂಗಾರು ಮಳೆಯ ಸಮಯದಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಎದುರಿಸಲು ಅಗತ್ಯ ಸೂಚನೆ, ನಿರ್ದೇಶನಗಳನ್ನು ನೀಡಿದರು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿರುವುದರ ಕುರಿತು ಮತ್ತೊಮ್ಮೆ ಪರಿಶೀಲಿಸಿ, ರಾಜಕಾಲುವೆಗಳಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗಲು ಅಗತ್ಯವಿರುವ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಿ. ಚರಂಡಿ ಮತ್ತು ರಾಜ ಕಾಲುವೆಗಳಿಂದ ಮೇಲೆತ್ತಿದ್ದ ಮಣ್ಣನ್ನು ಸೂಕ್ತ ರೀತಿಯಲ್ಲಿ ಬೇರೆಡೆಯಲ್ಲಿ ವಿಲೇವಾರಿ ಮಾಡಿ ಎಂದು ಸೂಚನೆ ನೀಡಿದರು.

 

Leave a Reply

Your email address will not be published. Required fields are marked *