ಬೆಂಗಳೂರು: ಜೂನ್ 7ರ ಬೆಳಿಗ್ಗೆ 6 ಗಂಟೆವರಗೆ ರಾಜ್ಯದಲ್ಲಿ ಜಾರಿಯಲ್ಲಿದ್ದ ಕೊರೊನಾ ಲಾಕ್ಡೌನ್ನ್ನು ಜೂನ್ 14ರ ಬೆಳಿಗ್ಗೆ 6 ಗಂಟೆವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿ ಉದ್ದೇಶಿಸಿದ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದ್ದರೂ, ಸೋಂಕಿನ ಸರಪಳಿ ಪೂರ್ತಿಯಾಗಿ ತುಂಡಾಗಿಲ್ಲ. ಹೀಗಾಗಿ ತಜ್ಞರ ಸಮಿತಿಯ ಸಲಹೆಯ ಮೇರೆಗೆ ಜಾರಿಯಲ್ಲಿರುವ ಕಠಿಣ ನಿರ್ಬಂಧಗಳನ್ನು ಒಂದು ವಾರಗಳ ಕಾಲ ಮುಂದೂಡಲಾಗಿದೆ, ಎಂದು ತಿಳಿಸಿದ್ದಾರೆ.